ಪೋಸ್ಟ್‌ಗಳು

ಜುಲೈ, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

*ಅಕ್ಕ ಸುಬ್ಬಕ್ಕನ ಪ್ರವಚನ.* - *ಮಚ್ಚೇಂದ್ರ ಪಿ ಅಣಕಲ್

ಇಮೇಜ್
              ಮಚ್ಚೇಂದ್ರ ಪಿ ಅಣಕಲ್   _______________________________________ ಮಚ್ಚೇಂದ್ರ ಪಿ ಅಣಕಲ್ ಮೂಲತ: ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಶರಣನಗರ (ಕಿಣ್ಣಿ) ಗ್ರಾಮದಲ್ಲಿ 12-06-1979 ರಂದು ಜನಿಸಿದರು. ಸದ್ಯ ಕಲಬುರಗಿ ನಿವಾಸಿ. ಯಾದಗಿರಿ ಜಿಲ್ಲೆಯ ಮಾವಿನಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕರು. ಪತ್ರಿಕೋದ್ಯಮ ಹಾಗೂ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು. ಎಂ.ಇಡಿ ಪದವೀಧರರು.  ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಹಾಗೂ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ ಅನುಭವವಿದೆ. 2002 ರಲ್ಲಿ ಸಂಯುಕ್ತ ಕರ್ನಾಟಕ ಸಾಪ್ತಾಹಿಕ ಸೌರಭದ ತಿಂಗಳ ಕಥಾ ಸ್ಪರ್ಧೆಯಲ್ಲಿ ಇವರ 'ಲಾಟರಿ'ಕತೆ  ಬಹುಮಾನ ಪಡೆದಿದೆ . 2010 ರಲ್ಲಿ ಅಮೇರಿಕಾದ ನ್ಯೂಜೆರ್ಸಿಯಲ್ಲಿ ನಡೆದ 6ನೇ ಅಕ್ಕ ವಿಶ್ವ ಕಥಾ ಸ್ಪರ್ಧೆಯಲ್ಲಿ  'ಡಾಂಬಾರು ದಂಧೆ' ಕತೆ ಬಹುಮಾನ ಪಡೆದು 'ದೀಪಾತೊರಿದೆಡೆಗೆ'  ಕಥಾ ಸಂಕಲನದಲ್ಲಿ  ಪ್ರಕಟಗೊಂಡಿದೆ. ಬೆಳಗಾವಿಯಲ್ಲಿ ನಡೆದ 4ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ  ಇವರ ' ಮೊದಲ ಗಿರಾಕಿ '  ಕಥಾ ಸಂಕಲನಕ್ಕೆ ಉತ್ತಮ ಕಥಾ ಪುಸ್ತಕ ಪ್ರಶಸ್ತಿ , ಆಕಾಶವಾಣಿ ದೂರದರ್ಶನ, ನಾಡಿನ ವಿವಿಧ ಪತ್ರಿಕೆಗಳಲ್ಲಿ ಕತೆ-ಕವನಗಳು ಪ್ರಕಟವಾಗಿವೆ. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಬೇಲೂರಿನ ಉರಿಲಿಂಗ ಪೆದ್ದಿ ಮಠದಿಂದ ರಾಜ್ಯಮಟ್ಟದ ಮೊ...

*ಔತಣ* -ರಾಜಶೇಖರ ಕುಕ್ಕುಂದಾ –ಬಾಗಲಕೋಟೆ

ಇಮೇಜ್
ರಾಜಶೇಖರ ಕುಕ್ಕುಂದಾ –ಬಾಗಲಕೋಟೆ  ______________________________________ ರಾಜಶೇಖರ ಕುಕ್ಕುಂದಾ’ ಕಾವ್ಯನಾಮದೊಂದಿಗೆ ಬರೆಯುವ ರಾಜಶೇಖರ ಅಲ್ಲೂರಕರ್ ಅವರು ಮೂಲತಃ ಬಾಗಲಕೋಟೆಯ ಬಸವೇಶ್ವರ ಎಂಜಿನೀಯರಿಂಗ್ ಕಾಲೇಜಿನಲ್ಲಿ ಸಂಯೋಜಿತ ಪ್ರಾಧ್ಯಾಪಕರು. ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.  ಕೃತಿಗಳು:   ಚೆಲುವ ಚಂದಿರ,  ಗೋಲಗುಮ್ಮಟ, ಮತ್ತು ಪುಟಾಣಿ ಪ್ರಾಸಗಳು (ಮಕ್ಕಳ ಕವನ ಸಂಕಲನಗಳು), ತಾಂತ್ರಿಕ ವಿಷಯಗಳ ಪುಸ್ತಕಗಳನ್ನು ರಚಿಸಿದ್ದಾರೆ. ಅವರ ಕವಿತೆಗಳು ಸಿ. ಬಿ. ಎಸ್. ಇ. ಕನ್ನಡ ಭಾಷೆಯ ಪಠ್ಯದಲ್ಲಿ, ಕರ್ನಾಟಕ ಮತ್ತು ಮಹಾರಾಷ್ಟ್ರದ ಪಠ್ಯಪುಸ್ತಕಗಳಲ್ಲಿ ಮತ್ತು ಶಿಶುಗೀತೆಯ ಅಲ್ಬಂಗಳಲ್ಲಿ ಸೇರಿವೆ. ಕವಿತೆಗಳು ಮತ್ತು ಲೇಖನಗಳು ಕನ್ನಡ ದಿನ ಪತ್ರಿಕೆಗಳಲ್ಲಿ ಮತ್ತು ನಿಯತಕಾಲಿಕೆಗಳಲ್ಲಿ ಬೆಳಕು ಕಂಡಿವೆ; ಆಕಾಶವಾಣಿಯಲ್ಲಿ ಮಕ್ಕಳ ಧಾರಾವಾಹಿ ಮತ್ತು ಕವಿತೆಗಳು ಪ್ರಸಾರಗೊಂಡಿವೆ. ಪುರಸ್ಕಾರಗಳು:  ಪ್ರಜಾವಾಣಿ ದಿನಪತ್ರಿಕೆಯ ದೀಪಾವಳಿ ಶಿಶು ಕಾವ್ಯ ಸ್ಪರ್ಧೆಯಲ್ಲಿ ಹಲವು ಬಾರಿ ಬಹುಮಾನ, ಶಿವಮೊಗ್ಗದ ಕರ್ನಾಟಕ ಸಂಘವು ಮಕ್ಕಳ ಸಾಹಿತ್ಯಕ್ಕೆ ನೀಡುವ 2012 ನೇ ಸಾಲಿನ ‘ನಾ ಡಿಸೋಜಾ’ ಪುರಸ್ಕಾರ, 2013 ನೇ ಸಾಲಿನ ‘ಅಮ್ಮ’ ಪುರಸ್ಕಾರ ಪಡೆದಿದ್ದಾರೆ. ಕೃಪೆ:ಬುಕ್ ಬ್ರಹ್ಮ ಇಗೋ ಅವರದ್ದು ಒಂದು ಕವಿತೆ             ...

*ನಾವು ಹುಡುಗಿಯರೇ ಹೀಗೆ* - ಪ್ರತಿಭಾ ನಂದಕುಮಾರ್

ಇಮೇಜ್
*ಪ್ರತಿಭಾ ನಂದಕುಮಾರ್* ಲೇಖಕಿ ಪ್ರತಿಭಾ ನಂದಕುಮಾರ್ ಅವರು ಮೂಲತಃ ಬೆಂಗಳೂರಿನವರು. 1955 ಡಿಸೆಂಬರ್ 15ರಂದು ಜನಿಸಿದರು. ತಂದೆ-ವಿ. ಎಸ್. ರಾಮಚಂದ್ರರಾವ್, ತಾಯಿ- ಯಮುನಾಬಾಯಿ. ಬಾಲ್ಯದ ಬಹುದಿನಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಕಳೆದಿರುವ ಪ್ರತಿಭಾ, ಮದ್ರಾಸ್ ವಿಶ್ವವಿದ್ಯಾಲಯದಿಂದ ಎಂ.ಎ ಮತ್ತು ಎಂ.ಫಿಲ್ ಪದವಿ ಪಡೆದಿದ್ದಾರೆ. ಎನ್.ಜಿ.ಎಫ್‌ನಲ್ಲಿ ಭಾಷಾಂತರಕಾರರಾಗಿ ನಂತರ ಇಂಡಿಯನ್ ಎಕ್ಸ್‌ಪ್ರೆಸ್, ಡೆಕ್ಕನ್ ಹೆರಾಲ್ಡ್ ಮತ್ತು ಅಗ್ನಿ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿಯೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪತಿ ನಂದಕುಮಾರ್ ಹಾಗೂ ಮಕ್ಕಳು ಅಭಿರಾಮ್ ಮತ್ತು ಭಾಮಿನಿ ಜೊತೆ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಪ್ರತಿಭಾ ನಂದಕುಮಾರ್ ಕಾವ್ಯಧರ್ಮವನ್ನೇ ತಮ್ಮ ಮನೋಧರ್ಮವನ್ನಾಗಿಸಿಕೊಂಡಿರುವ ಕವಿ. ಅವರ ವೈಯಕ್ತಿಕ ಮತ್ತು ವೃತ್ತಿ ಬದುಕುಗಳೆರಡರಲ್ಲೂ ನಿರಂತರ ಸಾಹಸ ಮತ್ತು ಪ್ರಯೋಗಗಳನ್ನು ನಡೆಸಿದವರು. ಉತ್ಕಟವಾಗಿ ಜೀವಿಸುವುದೇ ಬದುಕಿನ ಪರಮ ಸತ್ಯವನ್ನು ತಿಳಿಯಲು ಇರುವ ಏಕೈಕ ದಾರಿ ಎಂದು ನಂಬಿರುವ ಪ್ರತಿಭಾ ಅದೇ ಉತ್ಕಟತೆಯನ್ನು ತಮ್ಮ ಕವಿ ಸಮಯದುದ್ದಕ್ಕೂ ಕಾದುಕೊಂಡಿದ್ದಾರೆ. ಅವರ ಪ್ರಕಟಿತ ಪುಸ್ತಕಗಳು- ನಾನು ಹುಡುಗಿಯರೇ ಹೀಗೆ, ಈತನಕ, ರಸ್ತೆಯಂಚಿನ ಗಾಡಿ, ಕವಡೆಯಾಟ, ಆಹಾ ಪುರುಷಾಕಾರಂ, ಅವರು ಪುರಾವೆಗಳನ್ನು ಕೇಳುತ್ತಾರೆ, ಮುನ್ನುಡಿ ಬೆನ್...